Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:18 - ಕನ್ನಡ ಸತ್ಯವೇದವು C.L. Bible (BSI)

18 ಜನರು : “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆ ಹೊರಡುವಂತೆಯೂ ನಮ್ಮ ರೆಪ್ಪೆಗಳೊಳಗಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳೆತ್ತಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:18
19 ತಿಳಿವುಗಳ ಹೋಲಿಕೆ  

“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಸ್ವಜನರು ನಾಶವಾದ ಕಾರಣದಿಂದಾಗಿ ಹರಿಯುತ್ತಿದೆ ನನ್ನ ಕಣ್ಣೀರು ತೊರೆಯಾಗಿ.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು