Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:23
54 ತಿಳಿವುಗಳ ಹೋಲಿಕೆ  

ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.


ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ,


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


‘ನಿಮಗೆ ಬುದ್ಧಿ ಬಂದಿದೆ’ ಎಂದುಕೊಳ್ಳಬೇಡಿ ‘ದೇವರೇ ಅವನನು ಖಂಡಿಸಲಿ, ನರನಿಂದಾಗದು,’ ಎನ್ನದಿರಿ.


ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


“ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ?


ಬೆನ್ನಿನ ಅಡ್ಡಣಗಳು ಅದಕ್ಕೆ ಕೊಟ್ಟಿವೆ ಕೆಚ್ಚನು ಒತ್ತಿದ ಮುದ್ರೆಯಂತೆ ಬಿಗಿದಿವೆ ಅದನು.


ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು