Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:26 - ಕನ್ನಡ ಸತ್ಯವೇದವು C.L. Bible (BSI)

26 ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:26
25 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು