Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:29 - ಕನ್ನಡ ಸತ್ಯವೇದವು C.L. Bible (BSI)

29 ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:29
17 ತಿಳಿವುಗಳ ಹೋಲಿಕೆ  

“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ.


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಮೂರ್ತಿಗಳನು ಮಾಡುವವರೆಲ್ಲರು ಈಡಾಗುವರು ನಾಚಿಕೆಗೆ ಮಾನಭಂಗಪಟ್ಟು ಒಟ್ಟಿಗೆ ಮುಳುಗುವರವರು ಅವಮಾನದೊಳಗೆ.


ನೀವು ಪಾಪಕಳಂಕಿತವಾದ ನಿಮ್ಮ ಕೈಯಿಂದ ನಿರ್ಮಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಎತ್ತಿ ಬಿಸಾಡುವ ದಿನ ಬರಲಿದೆ.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು : “ನೀವೇ ನಮ್ಮ ದೇವರು"ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.


ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು