Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:3 - ಕನ್ನಡ ಸತ್ಯವೇದವು C.L. Bible (BSI)

3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎತ್ತು ಯಜಮಾನನನ್ನು, ಕತ್ತೆ ಒಡೆಯನ [ಕೊಟ್ಟಿಗೆಯ] ಗೋದಲಿಯನ್ನು ತಿಳಿದಿರುವವು; ಇಸ್ರಾಯೇಲ್ ಜನರಿಗೋ ತಿಳುವಳಿಕೆಯಿಲ್ಲ, ನನ್ನ ಪ್ರಜೆಯು ಆಲೋಚಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:3
24 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.


ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.


“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು