Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:31 - ಕನ್ನಡ ಸತ್ಯವೇದವು C.L. Bible (BSI)

31 ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:31
25 ತಿಳಿವುಗಳ ಹೋಲಿಕೆ  

ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ನೀವು ಹೊಟ್ಟನ್ನು ಗರ್ಭದಲ್ಲಿ ಬೆಳೆಸಿ ಕೂಳೆಯನ್ನು ಹೆರುವಿರಿ. ನಿಮ್ಮ ನಿಟ್ಟುಸಿರು ನಿಮ್ಮನ್ನೇ ನುಂಗುವ ಬೆಂಕಿಯಾಗುವುದು.


“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು