Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:9 - ಕನ್ನಡ ಸತ್ಯವೇದವು C.L. Bible (BSI)

9 ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:9
37 ತಿಳಿವುಗಳ ಹೋಲಿಕೆ  

ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.


ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.


ಅದಕ್ಕೆ ಸರ್ವೇಶ್ವರ, “ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ,” ಎಂದರು.


ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು