Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:17 - ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:17
39 ತಿಳಿವುಗಳ ಹೋಲಿಕೆ  

ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ನೀವು ಸುಟ್ಟ ಸುಣ್ಣದಂತಾಗುವಿರಿ.


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು