Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:21 - ಕನ್ನಡ ಸತ್ಯವೇದವು C.L. Bible (BSI)

21 ಯಕೋಬ ಮನೆತನದವರಲ್ಲಿ ಅಳಿದುಳಿದ ಕೆಲವರು ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜನಶೇಷವು, ಅಂದರೆ ಯಾಕೋಬ್ಯರಲ್ಲಿ ಉಳಿದದ್ದು, ಪರಾಕ್ರವಿುಯಾದ ದೇವರ ಕಡೆಗೆ ತಿರುಗಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನ ಮನೆತನದಲ್ಲಿ ಅಳಿದುಳಿದವರು ಪರಾಕ್ರಮಿಯಾದ ದೇವರನ್ನು ಮತ್ತೆ ಅನುಸರಿಸತೊಡಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:21
17 ತಿಳಿವುಗಳ ಹೋಲಿಕೆ  

ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.


ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು