Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:28 - ಕನ್ನಡ ಸತ್ಯವೇದವು C.L. Bible (BSI)

28 ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಗೋ, ಬಂದರು, ಅಯ್ಯಾಥಿನ ಮೇಲೆ ಬಂದಿದ್ದಾರೆ, ವಿುಗ್ರೋನನ್ನು ಹಾದುಹೋಗಿದ್ದಾರೆ, ವಿುಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:28
12 ತಿಳಿವುಗಳ ಹೋಲಿಕೆ  

ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳಿದುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರು ಇದ್ದರು.


ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು;


ಅಷ್ಟರಲ್ಲಿ ದಾವೀದನು ತಾನು ತಂದವುಗಳನ್ನೂ ಆಹಾರಪದಾರ್ಥಗಳನ್ನೂ ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿದನು. ತನ್ನ ಸಹೋದರರ ಯೋಗಕ್ಷೇಮ ವಿಚಾರಿಸಿದನು.


ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.


ಒಂದು ಮಿಕ್ಮಾಷಿಗೆ ಮುಖಮಾಡಿ ಉತ್ತರಕ್ಕಿತ್ತು. ಇನ್ನೊಂದು ಗೆಬಕ್ಕೆ ಮುಖಮಾಡಿ ದಕ್ಷಿಣಕ್ಕಿತ್ತು.


ತರುವಾಯ ಅವರು ತಮ್ಮ ಮಡದಿ ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವೂ ಹಿಂದಿನಿಂದ ಹೊರಟರು.


ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.


ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು