Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:6 - ಕನ್ನಡ ಸತ್ಯವೇದವು C.L. Bible (BSI)

6 ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:6
38 ತಿಳಿವುಗಳ ಹೋಲಿಕೆ  

ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಜುದೇಯ ನಾಡು ಈಜಿಪ್ಟಿನವರಿಗೆ ಭಯಂಕರವಾಗಿರುವುದು. ಆ ನಾಡಿನ ಹೆಸರನ್ನು ಕೇಳಿದ್ದೇ ತಡ, ಪ್ರತಿಯೊಬ್ಬನೂ ಬೆಚ್ಚಿಬೀಳುವನು. ಪ್ರತಿಯೊಬ್ಬನೂ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಈಜಿಪ್ಟಿನ ವಿರುದ್ಧ ಮಾಡಿರುವ ಸಂಕಲ್ಪವನ್ನು ತಿಳಿದು ನಿಬ್ಬೆರಗಾಗುವನು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ನಿನ್ನ ಮರಳಿ ಕಟ್ಟುವವರು ಬರುತಿಹರು ತ್ವರೆಯಿಂದ ನಿನ್ನ ಕೆಡವಿ ಹಾಳುಮಾಡಿದವರು ಹೊರಡುತಿಹರು ನಿನ್ನಿಂದ.


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.


‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು