Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:7
13 ತಿಳಿವುಗಳ ಹೋಲಿಕೆ  

ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.


ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು