Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:9 - ಕನ್ನಡ ಸತ್ಯವೇದವು C.L. Bible (BSI)

9 ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ಕೆಮೀಷಿನ ಗತಿಯು ಕಲ್ನೋವಿಗೂ ಆಯಿತಲ್ಲವೆ, ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಷ್ಟೆ; ದಮಸ್ಕದ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:9
23 ತಿಳಿವುಗಳ ಹೋಲಿಕೆ  

ಯೋಷೀಯನು ಮಹಾದೇವಾಲಯದ ವಿಷಯದಲ್ಲಿ ಈ ಎಲ್ಲ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ರಾಜ ನೆಕೋ ಎಂಬುವನು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು.


ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?


ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?


ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ರಾಜ್ಯಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿರುತ್ತಾನೋ?


“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?


ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು. ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?


ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.


ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು