Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:13 - ಕನ್ನಡ ಸತ್ಯವೇದವು C.L. Bible (BSI)

13 ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಕ್ಕಾಗಿ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕವೂ ತೀಕ್ಷ್ಣರೋಷವೂ ಮಸಗುತ್ತಿರುವ ದಿನದಲ್ಲಿ [ಯೆಹೋವನೆಂಬ] ನಾನು ಆಕಾಶಮಂಡಲವನ್ನು ನಡುಗಿಸಿ ಭೂಲೋಕವನ್ನು ಸ್ಥಳದಿಂದ ಕದಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಕೋಪದಿಂದ ಆಕಾಶಮಂಡಲವನ್ನು ನಡುಗಿಸುವೆನು. ಭೂಮಿಯನ್ನು ಅದರ ಸ್ಥಳದಿಂದ ಕದಲಿಸುವೆನು.” ಸರ್ವಶಕ್ತನಾದ ಯೆಹೋವನು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:13
27 ತಿಳಿವುಗಳ ಹೋಲಿಕೆ  

ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು