Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:18 - ಕನ್ನಡ ಸತ್ಯವೇದವು C.L. Bible (BSI)

18 ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು; ಇವರು ಗರ್ಭಫಲವನ್ನು ಕನಿಕರಿಸರು, ಇವರ ಕಣ್ಣು ಮಕ್ಕಳನ್ನೂ ಕರುಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆತೋರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:18
18 ತಿಳಿವುಗಳ ಹೋಲಿಕೆ  

ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.


ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ಆದಕಾರಣ ಆ ದಿನದಂದು ಅಲ್ಲಿ ಯುವಕರು ಬೀದಿ ಚೌಕಗಳಲ್ಲಿ ಬಿದ್ದು ಸಾಯುವರು. ಯುದ್ಧವೀರರೆಲ್ಲರು ಸತ್ತು ಸ್ತಬ್ದರಾಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


ರಥವನ್ನೂ ಸಾರಥಿಯನ್ನೂ ಸ್ತ್ರೀಪುರುಷರನ್ನೂ ಬಾಲವೃದ್ಧರನ್ನೂ.


ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು