Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:20 - ಕನ್ನಡ ಸತ್ಯವೇದವು C.L. Bible (BSI)

20 ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದು ಎಂದಿಗೂ ನಿವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು; ಯಾವ ಅರಬಿಯನೂ ಗುಡಾರಹಾಕನು; ಕುರುಬರು ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:20
20 ತಿಳಿವುಗಳ ಹೋಲಿಕೆ  

ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಈ ಕಾರಣ, ತೋಳಗಳೂ ಕಾಡುಮೃಗಗಳೂ ಬೀಡುಮಾಡುವುವಲ್ಲಿ. ಉಷ್ಟ್ರಪಕ್ಷಿಗಳೂ ತಂಗುವುವು ಅಲ್ಲಿ. ಅದೆಂದಿಗೂ ನಿವಾಸಸ್ಥಳ ಆಗದು ತಲತಲಾಂತರಕ್ಕೂ ಜನರು ಅಲ್ಲಿ ಒಕ್ಕಲಿರರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ :


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”


ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು