Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 13:21 - ಕನ್ನಡ ಸತ್ಯವೇದವು C.L. Bible (BSI)

21 ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದು ಕಾಡುಮೃಗಗಳಿಗೆ ಹಕ್ಕೆಯಾಗುವದು, ಅಲ್ಲಿನ ಮನೆಗಳಲ್ಲಿ ಗೂಬೆಗಳು ತುಂಬಿಕೊಳ್ಳುವವು, ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 13:21
10 ತಿಳಿವುಗಳ ಹೋಲಿಕೆ  

ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಈ ಕಾರಣ, ತೋಳಗಳೂ ಕಾಡುಮೃಗಗಳೂ ಬೀಡುಮಾಡುವುವಲ್ಲಿ. ಉಷ್ಟ್ರಪಕ್ಷಿಗಳೂ ತಂಗುವುವು ಅಲ್ಲಿ. ಅದೆಂದಿಗೂ ನಿವಾಸಸ್ಥಳ ಆಗದು ತಲತಲಾಂತರಕ್ಕೂ ಜನರು ಅಲ್ಲಿ ಒಕ್ಕಲಿರರು.


ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು; ಅದರ ಹಾಳುಬಿದ್ದ ಮನೆಗಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಯಿಂದ ಕೇಳಿಬರುವುದು; ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು; ದೇವದಾರು ಮರದ ತೊಲೆಗಳು ಕಳಚಿಬೀಳುವುವು.


ಉಷ್ಟ್ರಪಕ್ಷಿ, ಉಲೂಕ, ಕಡಲ ಹಕ್ಕಿ,


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು