Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:19 - ಕನ್ನಡ ಸತ್ಯವೇದವು C.L. Bible (BSI)

19 ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ, ಖಡ್ಗ ತಿವಿದು ಕಲ್ಲುಗುಂಡಿಗೆ ಪಾಲಾದ ಹೆಣಗಳ ಹೊದಿಕೆಯಂತೆಯೂ, ಪರರ ತುಳಿತಕ್ಕೆ ಈಡಾಗಿ, ಸಮಾಧಿಯೊಳಗಿಂದ ಹೊರಗೆ ಬಿಸಾಡಿರುವ ಶವದ ಹಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:19
17 ತಿಳಿವುಗಳ ಹೋಲಿಕೆ  

“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು.


ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.


ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ


ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು.


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.


ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.


ಅವರಲ್ಲಿ ಹತರಾದವರು ಬೀದಿಪಾಲಾಗುವರು, ಅವರ ಶವಗಳಿಂದ ದುರ್ವಾಸನೆಯು ಬಡಿಯುವುದು. ಅವರ ರಕ್ತಪ್ರವಾಹವು ಗುಡ್ಡಗಳನ್ನು ತೋಯಿಸುವುದು.


ಬಾಬಿಲೋನಿಯರು ತಮ್ಮ ದೇಶದಲ್ಲೆ ಹತರಾಗಿ ಬೀಳುವರು. ಅದರ ಬೀದಿಗಳಲ್ಲೆ ಕತ್ತಿಗೆ ತುತ್ತಾಗಿ ಮಣ್ಣುಪಾಲಾಗುವರು.


ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು