Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:20 - ಕನ್ನಡ ಸತ್ಯವೇದವು C.L. Bible (BSI)

20 ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ. ಆದರೆ ನೀನು ಅವರೊಂದಿಗೆ ಸೇರಲಾರೆ. ಯಾಕೆಂದರೆ ನಿನ್ನ ರಾಜ್ಯವನ್ನು ನೀನೇ ನಾಶಮಾಡಿರುವೆ. ನೀನು ನಿನ್ನ ಜನರನ್ನೇ ಸಾಯಿಸಿರುವೆ. ಆದರೆ ನೀನು ನಾಶಮಾಡಿದಂತೆ ನಾಶಮಾಡಲು ನಿನ್ನ ಮಕ್ಕಳಿಗೆ ಅವಕಾಶಕೊಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:20
13 ತಿಳಿವುಗಳ ಹೋಲಿಕೆ  

ನಿರ್ಮೂಲಮಾಡುವೆ ನೀನವರ ಸಂತಾನವನು ಧರೆಯಿಂದ I ಕುಡಿಯಿಲ್ಲದಾಗಿಸುವೆ ಅವರನು ಮಾನವರ ಮಧ್ಯದಿಂದ II


ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.


ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು