Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:12 - ಕನ್ನಡ ಸತ್ಯವೇದವು C.L. Bible (BSI)

12 ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:12
24 ತಿಳಿವುಗಳ ಹೋಲಿಕೆ  

ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


“ಮೋವಾಬಿನ ಪೂಜಾಸ್ಥಾನಗಳಲ್ಲಿ ಬಲಿಯರ್ಪಿಸುವುದನ್ನೂ ತಮ್ಮ ದೇವರುಗಳಿಗೆ ಧೂಪಾರತಿಯೆತ್ತುವುದನ್ನೂ ನಿಲ್ಲಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.


ಅಲ್ಲಿಂದ ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಕೆಳಗಿರುವ ‘ಯೆಷೀಮೋನ್’ ಎಂಬ ಮರುಭೂಮಿ ಕಾಣಿಸುತ್ತಿತ್ತು.


ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.


ಇದಾದ ಬಳಿಕ ಬಿಳಾಮನು ಬಾಲಾಕನೊಂದಿಗೆ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.


ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.


ಸೀಹೋನನಾ ಪಟ್ಟಣ, ಆ ಹೆಷ್ಬೋನ್, ಅಲ್ಲಿಂದಲೆ ಹೊರಟು ಬಂದಿತು ಅಗ್ನಿಜ್ವಾಲೆ. ದಹಿಸಿ ಬಿಟ್ಟಿತದು ಮೋವಾಬ್ಯರ ರಾಜಧಾನಿಯಾದ ಆರ್ ನಗರವನ್ನು, ಅರ್ನೋನ್ ಹೊಳೆಯ ಬಳಿಯ ಪೂಜಾಸ್ಥಳಗಳ ದೇವತೆಗಳನ್ನು.


ಮೋವಾಬ್ಯರ ವಿಷಯವಾಗಿ ಸರ್ವೇಶ್ವರ ಹಿಂದೆ ನುಡಿದ ದೇವೋಕ್ತಿಯಿದೇ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು