Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 16:8 - ಕನ್ನಡ ಸತ್ಯವೇದವು C.L. Bible (BSI)

8 ನಿಸ್ಸಾರವಾಗಿದೆ ಹೆಷ್ಬೋನಿನ ಹೊಲ, ಸಿಬ್ಮದ ದ್ರಾಕ್ಷಾಲತೆ, ಒಮ್ಮೆ ವ್ಯಾಪಿಸಿತ್ತು ಆ ರಾಜ್ಯದ್ರಾಕ್ಷಿ ಯಜ್ಜೇರಿನವರೆಗೆ, ಹಬ್ಬಿತ್ತದರ ಶಾಖೆ ಮರುಭೂಮಿಗೆ, ಸಮುದ್ರದಾಚೆ, ಮಾಡಿತು ನಾಡಿನೊಡೆಯರನು ಕುಡಿದು ಮತ್ತರಾಗುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆಷ್ಬೋನಿನ ಭೂವಿುಯೂ ಸಿಬ್ಮದ ದ್ರಾಕ್ಷಾಲತೆಯೂ ನಿಸ್ಸಾರವಾಗಿವೆ; ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷೆಗಳನ್ನು ಜನಾಂಗಗಳ ಒಡೆಯರು ಮುರಿದು ಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೆಷ್ಬೋನ್ ಊರಿನ ಹೊಲ ಮತ್ತು ಸಿಬ್ಮ ಊರಿನ ದ್ರಾಕ್ಷಿ ಸಹ ನಿಸ್ಸಾರವಾಗಿವೆ. ಇತರ ಜನರ ಪ್ರಭುಗಳು ವಿಶಾಲವಾದ ದ್ರಾಕ್ಷಿಗಿಡಗಳನ್ನು ತುಳಿದು ಹಾಕಿದ್ದಾರೆ, ಆ ದ್ರಾಕ್ಷಿಗಿಡಗಳು ಯಜ್ಜೇರ್ ಊರಿನವರೆಗೂ ವ್ಯಾಪಿಸಿ, ಮರುಭೂಮಿಯಲ್ಲಿ ಹರಡಿತ್ತು. ಅದರ ಕೊಂಬೆಗಳು ಹಬ್ಬಿ, ಸಮುದ್ರದವರೆಗೆ ವಿಶಾಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 16:8
13 ತಿಳಿವುಗಳ ಹೋಲಿಕೆ  

ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು.


ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


‘ಸಿಬ್ಮ’ದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ದುಃಖಿಸುವುದಕ್ಕಿಂತಲು ನಿನ್ನನ್ನು ಕಂಡು ಹೆಚ್ಚಾಗಿ ದುಃಖಿಸುತ್ತೇನೆ. ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿವೆ. ಈಗ ನಿನ್ನ ಹಣ್ಣುಹಂಪಲುಗಳ ಮೇಲೆ ಹಾಗು ದ್ರಾಕ್ಷೆಯ ಸುಗ್ಗಿಯ ಮೇಲೆ ಸೂರೆಗಾರ ಬಂದೆರಗಿದ್ದಾನೆ.


ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.


ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಕಿರ್ಯಾತಯಿಮ್, ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿ ಇರುವ ಗುಡ್ಡದ ಮೇಲಿನ ಚೆರೆತ್ ಶಹರ್, ಬೇತ್ಪೆಗೋರ್ ಎಂಬ ನಗರಗಳು,


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು