Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:1 - ಕನ್ನಡ ಸತ್ಯವೇದವು C.L. Bible (BSI)

1 ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಮಸ್ಕದ ವಿಷಯವಾದ ದೈವೋಕ್ತಿ. ಆಹಾ ದಮಸ್ಕವು ಇನ್ನು ಊರಾಗಿರದೆ ಹಾಳು ದಿಬ್ಬವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:1
24 ತಿಳಿವುಗಳ ಹೋಲಿಕೆ  

ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.


ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;


ದಾವೀದನು ಚೋಬದವರನ್ನು ಸಂಹರಿಸಿದಾಗ ಈ ರೆಜೋನನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ, ಕೆಲವು ಮಂದಿಯನ್ನು ಕೂಡಿಸಿಕೊಂಡು, ತಾನು ಅವರ ನಾಯಕನಾಗಿ, ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.


ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು