Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:10 - ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:10
48 ತಿಳಿವುಗಳ ಹೋಲಿಕೆ  

ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.


ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II


ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಆ ದಿನದಂದು ನಾಡಿನ ಸುಭದ್ರವಾದ ನಗರಗಳು ನಿರ್ಜನ ಪ್ರದೇಶಗಳಾಗುವುವು. ಇಸ್ರಯೇಲರಿಗೆ ಹೆದರಿ ಅಮೋರ್ಯರು ಮತ್ತು ಹಿವ್ವಿಯರು ಬಿಟ್ಟುಹೋದ ಹಾಳು ನಿವೇಶನಗಳಂತಾಗುವುವು, ನಾಡೆಲ್ಲ ಹಾಳುಬೀಳುವುದು.


ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು