Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:12 - ಕನ್ನಡ ಸತ್ಯವೇದವು C.L. Bible (BSI)

12 ಸಮುದ್ರದಂತೆ ಭೋರ್ಗರೆಯುವ, ಪ್ರಚಂಡ ಜನಪ್ರವಾಹಗಳಂತೆ ಗರ್ಜಿಸುವ ಪ್ರಬಲ ರಾಷ್ಟ್ರಗಳ ಆರ್ಭಟವನ್ನು ಕೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:12
21 ತಿಳಿವುಗಳ ಹೋಲಿಕೆ  

“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.


ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II


ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.


ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II


ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.


ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.


ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು