Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:14 - ಕನ್ನಡ ಸತ್ಯವೇದವು C.L. Bible (BSI)

14 ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:14
24 ತಿಳಿವುಗಳ ಹೋಲಿಕೆ  

ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”


ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಆಗ, ನಿನ್ನ ಮೇಲೆ ಹೋರಾಡಿ, ನಿನಗೂ ನಿನ್ನ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ನಿನ್ನನ್ನು ಬಾಧಿಸುವ ಸಕಲ ಜಾತಿಜನಾಂಗಗಳು ಕನಸಿನಂತೆ, ರಾತ್ರಿಕಾಲದ ಸ್ವಪ್ನದಂತೆ ಮಾಯವಾಗುವುವು.


ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ.


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು.


ಆದರೆ ನಾನು ಏಸಾವನನ್ನು ಬರೀ ಮೈಯಾಗಿಸಿಬಿಟ್ಟಿದ್ದೇನೆ. ಅವನ ಗುಪ್ತಸ್ಥಳಗಳನ್ನು ಬಟ್ಟಬೈಲಾಗಿಸಿಬಿಟ್ಟಿದ್ದೇನೆ. ಅವಿತುಕೊಳ್ಳಲಾಗದು. ಅವನ ಸಂತಾನದವರು, ಸಹೋದರರು ಹಾಗು ನೆರೆಹೊರೆಯವರು ಹಾಳಾದರು. ಅವನೂ ಇಲ್ಲವಾದನು.


ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು