Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 17:9 - ಕನ್ನಡ ಸತ್ಯವೇದವು C.L. Bible (BSI)

9 ಆ ದಿನದಂದು ನಾಡಿನ ಸುಭದ್ರವಾದ ನಗರಗಳು ನಿರ್ಜನ ಪ್ರದೇಶಗಳಾಗುವುವು. ಇಸ್ರಯೇಲರಿಗೆ ಹೆದರಿ ಅಮೋರ್ಯರು ಮತ್ತು ಹಿವ್ವಿಯರು ಬಿಟ್ಟುಹೋದ ಹಾಳು ನಿವೇಶನಗಳಂತಾಗುವುವು, ನಾಡೆಲ್ಲ ಹಾಳುಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು [ಪೂರ್ವದಲ್ಲಿ] ಇಸ್ರಾಯೇಲ್ಯರ ಭಯದಿಂದ ನಿರ್ಜನವಾಗಿದ್ದ ಈಗ ಅಡವಿಯಲ್ಲಿಯೂ ಬೆಟ್ಟಗಳ ತುದಿಯ ಮೇಲೂ ಕಾಣುವ ಪಾಳು ನಿವೇಶನಗಳಂತಿರುವವು; ಅಂತು ದೇಶವೆಲ್ಲಾ ಹಾಳಾಗಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 17:9
16 ತಿಳಿವುಗಳ ಹೋಲಿಕೆ  

ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ಕೋಟೆಕೊತ್ತಲಗಳನ್ನು ಕೆಡವಿಬಿಡುವೆನು.


ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.


ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು