Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 18:5 - ಕನ್ನಡ ಸತ್ಯವೇದವು C.L. Bible (BSI)

5 ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೊಯ್ಲಿನ ಕಾಲಕ್ಕೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಿಂದಾದ ಹೀಚು ದೋರೆಗಾಯಿಯಾಗುತ್ತಿರುವಾಗ ಆತನು ಕುಡುಗೋಲುಗಳಿಂದ ಕುಡಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 18:5
6 ತಿಳಿವುಗಳ ಹೋಲಿಕೆ  

ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.


ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ :


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು