Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:13 - ಕನ್ನಡ ಸತ್ಯವೇದವು C.L. Bible (BSI)

13 ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚೋಯನಿನ ಅಧಿಪತಿಗಳು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದ್ದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:13
14 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.


ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.


ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಆಗ ಸೌಲನು ಜನರ ಮುಖಂಡರಿಗೆ, “ನೀವೆಲ್ಲರೂ ಇಲ್ಲಿಗೆ ಬಂದು, ಈ ದಿನ ಎಲ್ಲಿ ಪಾಪಕೃತ್ಯ ನಡೆದಿದೆ ಎಂದು ವಿಚಾರಿಸಿ ಗುರುತು ಹಚ್ಚಿರಿ.


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು