Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:18 - ಕನ್ನಡ ಸತ್ಯವೇದವು C.L. Bible (BSI)

18 ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತದೇಶದಲ್ಲಿರುವವು; ಇವುಗಳಲ್ಲಿ ಒಂದರ ಹೆಸರು ನಾಶಪುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಸಮಯದಲ್ಲಿ ಈಜಿಪ್ಟಿನಲ್ಲಿ ಕಾನಾನ್ ದೇಶದ (ಯೆಹೂದ್ಯರ) ಭಾಷೆಯನ್ನಾಡುವ ಐದು ಪಟ್ಟಣಗಳಿರುವವು. ಅದರಲ್ಲಿ ಒಂದರ ಹೆಸರು “ನಾಶನದ ನಗರ.” ಆ ಜನರು ಸರ್ವಶಕ್ತನಾದ ಯೆಹೋವನನ್ನು ಹಿಂಬಾಲಿಸಲು ತೀರ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:18
15 ತಿಳಿವುಗಳ ಹೋಲಿಕೆ  

“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು