Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 2:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 2:2
56 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


“ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.


ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವು I ಆತನದೆ ರಾಷ್ಟ್ರಗಳ ಒಡೆತನವೆಲ್ಲವು II


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II


ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II


ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು