Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:1 - ಕನ್ನಡ ಸತ್ಯವೇದವು C.L. Bible (BSI)

1 ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ಡೋದಿಗೆ ಬಂದು ಅದನ್ನು ಮುತ್ತಿಹಿಡಿದ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:1
9 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ ದಾಗೋನನ ಗುಡಿಗೆ ಒಯ್ದರು.


ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು