Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:5 - ಕನ್ನಡ ಸತ್ಯವೇದವು C.L. Bible (BSI)

5 ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:5
17 ತಿಳಿವುಗಳ ಹೋಲಿಕೆ  

ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು.


ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.


ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.


ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.


ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ,


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು.


ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”


ಸುಡಾನ್ ಮತ್ತು ಈಜಿಪ್ಟ್ ಅದಕ್ಕೆ ಬೆಂಬಲವಾಗಿದ್ದವು. ಪೂಟ್ ಮತ್ತು ಲಿಬ್ನ ಅದಕ್ಕೆ ಮಿತ್ರನಾಡುಗಳಾಗಿದ್ದವು


ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು