Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:5 - ಕನ್ನಡ ಸತ್ಯವೇದವು C.L. Bible (BSI)

5 ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ : “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರಾದರೋ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ. ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:5
12 ತಿಳಿವುಗಳ ಹೋಲಿಕೆ  

ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.


ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


“ಗುರಾಣಿ ಖೇಡ್ಯಗಳನ್ನು ಸಿದ್ಧಮಾಡಿ ಯುದ್ಧಕ್ಕೆ ಹೊರಡಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು