Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:24 - ಕನ್ನಡ ಸತ್ಯವೇದವು C.L. Bible (BSI)

24 “ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:24
12 ತಿಳಿವುಗಳ ಹೋಲಿಕೆ  

ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು?


ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.”


ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು