Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:4 - ಕನ್ನಡ ಸತ್ಯವೇದವು C.L. Bible (BSI)

4 ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಚೀದೋನೇ, ನೀನು ತುಂಬಾ ದುಃಖದಿಂದಿರಬೇಕು. ಯಾಕೆಂದರೆ ಸಮುದ್ರವೂ ಸಮುದ್ರದ ಕೋಟೆಯೂ ಹೇಳುವುದೇನೆಂದರೆ, “ನನಗೆ ಮಕ್ಕಳಿಲ್ಲ, ನಾನು ಪ್ರಸವವೇದನೆ ಅನುಭವಿಸಲಿಲ್ಲ. ನಾನು ಮಕ್ಕಳನ್ನು ಹೆರಲಿಲ್ಲ. ನಾನು ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಬೆಳೆಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:4
12 ತಿಳಿವುಗಳ ಹೋಲಿಕೆ  

“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;


ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.


“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು