Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:12 - ಕನ್ನಡ ಸತ್ಯವೇದವು C.L. Bible (BSI)

12 ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಟ್ಟಣದಲ್ಲಿ ಹಾಳೇ ಉಳಿದಿದೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:12
12 ತಿಳಿವುಗಳ ಹೋಲಿಕೆ  

ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.


ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು