Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:10 - ಕನ್ನಡ ಸತ್ಯವೇದವು C.L. Bible (BSI)

10 ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:10
36 ತಿಳಿವುಗಳ ಹೋಲಿಕೆ  

ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.


ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಆದರೆ ಆ ಮಳೆ, ಆ ಕಲ್ಲುಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನು ಹಾಗು ಅವನ ಪರಿವಾರದವರು ತಮ್ಮ ಹೃದಯಗಳನ್ನು ಪುನಃ ಕಠಿಣವಾಗಿಸಿಕೊಂಡು, ಪಾಪ ಕಟ್ಟಿಕೊಂಡರು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ,


ಆದರೂ ತಾವಾಗಲಿ ತಮ್ಮ ಪರಿವಾರದವರಾಗಲಿ ದೇವರಾದ ಸರ್ವೇಶ್ವರನಿಗೆ ಭಯಪಡುವುದಿಲ್ಲವೆಂದು ಬಲ್ಲೆನು,” ಎಂದನು.


ದಂಡನೆ ಮೇಲೆ ದಂಡನೆಯನು ಅವರಿಗೆ ವಿಧಿಸು I ಅವರು ನಿರಪರಾಧಿಗಳೆಂಬುದನು ತಪ್ಪಿಸು II


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು