Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:11 - ಕನ್ನಡ ಸತ್ಯವೇದವು C.L. Bible (BSI)

11 ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:11
42 ತಿಳಿವುಗಳ ಹೋಲಿಕೆ  

ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಯಕೋಬ ವಂಶಜರೇ, ನಿಮ್ಮ ಎದುರಾಳಿಗಳ ಮೇಲೆ ನಿಮಗೆ ಜಯ ಲಭಿಸಲಿ. ನಿಮ್ಮ ಶತ್ರುಗಳೆಲ್ಲಾ ನಿರ್ಮೂಲವಾಗಲಿ.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II


ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II


ದೇವರ ಮಾರ್ಗಗಳೆಲ್ಲವನು ಅವರು ಅಲಕ್ಷ್ಯಮಾಡಿದರು ಆತನಿಗೆ ವಿಧೇಯರಾಗದೆ ತಿರುಗಿಬಿದ್ದರು.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಆಹುತಿಯಾದರವರ ಯುವಜನ ಅಗ್ನಿಗೆ I ವಿವಾಹವಾಗಲಿಲ್ಲ ಅವರ ಕನ್ಯೆಯರಿಗೆ II


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.


ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು