Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ನಾವು ನಡಿಸಿದ್ದೆಲ್ಲವೂ ನೀನು ನಮಗೋಸ್ಕರ ನಡಿಸಿದ್ದೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನಮಗೆ ಸಮಾಧಾನವನ್ನು ವಿಧಿಸುವಿರಿ. ಏಕೆಂದರೆ ನೀವು ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:12
22 ತಿಳಿವುಗಳ ಹೋಲಿಕೆ  

ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.


ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು