Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:13 - ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:13
15 ತಿಳಿವುಗಳ ಹೋಲಿಕೆ  

ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.


ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸ ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು,” ಎಂದು ಹೇಳಿದರು.


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು