Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:16 - ಕನ್ನಡ ಸತ್ಯವೇದವು C.L. Bible (BSI)

16 ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:16
23 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಬಿಚ್ಚುವೆನು ಆತನ ಮುಂದೆ ಚಿಂತೆಯ ಕಟ್ಟನು I ಅರಿಕೆ ಮಾಡುವೆನು ನನ್ನ ಕಷ್ಟ ಸಂಕಟವನು II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು