Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ. ನಾವು ಹೆರುವದು ಕೇವಲ ಗಾಳಿಯನ್ನೇ. ನಾವು ಈ ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ. ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು. ಭೂಮಿಗೆ ನಮ್ಮಿಂದ ಯಾವ ಬಿಡುಗಡೆಯೂ ಆಗಲಿಲ್ಲ. ಭೂಲೋಕದ ಜನರಿಗೆ ಜನ್ಮ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:18
12 ತಿಳಿವುಗಳ ಹೋಲಿಕೆ  

ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.


ನೀವು ಹೊಟ್ಟನ್ನು ಗರ್ಭದಲ್ಲಿ ಬೆಳೆಸಿ ಕೂಳೆಯನ್ನು ಹೆರುವಿರಿ. ನಿಮ್ಮ ನಿಟ್ಟುಸಿರು ನಿಮ್ಮನ್ನೇ ನುಂಗುವ ಬೆಂಕಿಯಾಗುವುದು.


ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು