Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:5 - ಕನ್ನಡ ಸತ್ಯವೇದವು C.L. Bible (BSI)

5 ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಎತ್ತರದಲ್ಲಿ ವಾಸಿಸುವವರನ್ನೂ [ಅವರ] ಉನ್ನತಪಟ್ಟಣವನ್ನೂ ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾರೆ. ಉನ್ನತದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾರೆ. ಅದನ್ನು ಕೆಡವಿ ನೆಲಸಮಮಾಡಿ ಧೂಳಿಗೆ ತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:5
18 ತಿಳಿವುಗಳ ಹೋಲಿಕೆ  

ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.


‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು.


ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು