Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:9 - ಕನ್ನಡ ಸತ್ಯವೇದವು C.L. Bible (BSI)

9 ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:9
28 ತಿಳಿವುಗಳ ಹೋಲಿಕೆ  

ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಪ್ರಭು ನಮ್ಮ ದೇವನೆಂಬುದು ಶ್ರುತ I ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ II


ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ.


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು