Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:13 - ಕನ್ನಡ ಸತ್ಯವೇದವು C.L. Bible (BSI)

13 ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:13
51 ತಿಳಿವುಗಳ ಹೋಲಿಕೆ  

ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಏಳನೆಯ ದೇವದೂತನು ತುತೂರಿಯನ್ನು ಊದುವನು. ಆಗ ದೇವರು ಇದುವರೆಗೆ ನಿಗೂಢವಾಗಿಟ್ಟಿದ್ದ ತಮ್ಮ ಯೋಜನೆಯನ್ನು ತಮ್ಮ ದಾಸರಾದ ಪ್ರವಾದಿಗಳಿಗೆ ಮುಂತಿಳಿಸಿದ್ದ ಪ್ರಕಾರ ಈಡೇರಿಸುವರು.”


ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.


ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು