Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:5 - ಕನ್ನಡ ಸತ್ಯವೇದವು C.L. Bible (BSI)

5 ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬೇಡವಾದರೆ ಆ ಶತ್ರುಗಳು ನನ್ನ ಬಲವನ್ನು ಶರಣುಹೊಂದಲಿ, ನನ್ನ ಸಂಗಡ ಸಮಾಧಾನಕ್ಕೆ ಬರಲಿ, ನನ್ನೊಡನೆ ಸಂಧಿಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:5
22 ತಿಳಿವುಗಳ ಹೋಲಿಕೆ  

ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು