Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ತನ್ನ ಪ್ರಜೆಯ ಘಾತಕರನ್ನು ಹೊಡೆದಂತೆ ಆ ತನ್ನ ಪ್ರಜೆಯನ್ನು ಹೊಡೆದನೋ? ಅವರಿಗಾದಂಥ ಸಂಹಾರವು ಆ ಪ್ರಜೆಗೆ ಆಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:7
17 ತಿಳಿವುಗಳ ಹೋಲಿಕೆ  

ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ಹೀಗೆ ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿದ ಅಸ್ಸೀರಿಯಾದವರು ದಿಗ್ಬ್ರಮೆಗೊಳ್ಳುವರು. ರಾಜದಂಡದ ಶಿಕ್ಷೆಯನ್ನು ಸವಿಯುವರು.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು