Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:1 - ಕನ್ನಡ ಸತ್ಯವೇದವು C.L. Bible (BSI)

1 ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:1
28 ತಿಳಿವುಗಳ ಹೋಲಿಕೆ  

ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


“ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.


ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.


ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.


ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.


“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.


“ಇಟ್ಟಿಗೆಗಳು ಬಿದ್ದುಹೋಗಿವೆ. ಕೆತ್ತನೆ ಕಲ್ಲುಗಳಿಂದ ಮರಳಿ ಕಟ್ಟುವೆವು. ಕಡಿದಿರುವರು ಅತ್ತಿಮರಗಳನ್ನು, ಅಲ್ಲೇ ನೆಡುವೆವು ದೇವದಾರು ವೃಕ್ಷಗಳನ್ನು,” ಎಂದು ಗರ್ವದಿಂದ ಕೊಚ್ಚಿಕೊಳ್ಳುವ


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?


ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಯಕೋಬ ಕುಲದವರಿಗೆ‍ ಶಾಪದ ಸಂದೇಶ ಒಂದನ್ನು ಸರ್ವೇಶ್ವರ ಕಳುಹಿಸಿರುವರು. ಅದು ಇಸ್ರಯೇಲರ ಮೇಲೆ ಎರಗುವುದು.


ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು