Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:17 - ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:17
35 ತಿಳಿವುಗಳ ಹೋಲಿಕೆ  

ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು