Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:10
21 ತಿಳಿವುಗಳ ಹೋಲಿಕೆ  

“ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II


ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.


ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.


ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”


ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು